ಹೊಸ ವಾಹನ ಕೊಳ್ಳಲಿದ್ದೀರಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರಿಂದ ಸಹಾಯ ದೊರೆಯಲಿದೆ; ನಾಳೆಯ ದಿನ ಭವಿಷ್ಯ
10th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
![ಹೊಸ ವಾಹನ ಕೊಳ್ಳಲಿದ್ದೀರಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರಿಂದ ಸಹಾಯ ದೊರೆಯಲಿದೆ; ನಾಳೆಯ ದಿನ ಭವಿಷ್ಯ ಹೊಸ ವಾಹನ ಕೊಳ್ಳಲಿದ್ದೀರಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರಿಂದ ಸಹಾಯ ದೊರೆಯಲಿದೆ; ನಾಳೆಯ ದಿನ ಭವಿಷ್ಯ](https://cdn.statically.io/img/images.hindustantimes.com/kannada/img/2024/07/09/400x225/1_1720518631516_1720518640520.jpg)
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th July 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ: ಚೌತಿ ಬೆಳಗ್ಗೆ 06.17 ರವರೆಗೂ ಇದ್ದು ನಂತರ ಪಂಚಮಿ ಆರಂಭವಾಗುತ್ತದೆ.
ನಕ್ಷತ್ರ : ಮಖೆ ನಕ್ಷತ್ರವು ಬೆಳಗ್ಗೆ 09.40 ರವರೆಗೂ ಇದ್ದು ನಂತರ ಪುಬ್ಬ ನಕ್ಷತ್ರ ಇರುತ್ತದೆ.
ಸೂರ್ಯೋದಯ: ಬೆಳಗ್ಗೆ 05.59
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: 12.28 ರಿಂದ 02.04
ರಾಶಿ ಫಲ
ಮೇಷ
ನಿಮಗೆ ಅರಿಯದಂತೆ ಹಣಕಾಸಿನ ವಿವಾದದಲ್ಲಿ ಸಿಲುಕುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ನಿಮ್ಮನ್ನು ಹೊಗಳಿದವರು ಸಹಾಯ ಮಾಡದೆ ಹೋಗುತ್ತಾರೆ. ಸಂಬಂಧಿಕರ ಜೊತೆ ಭೂವಿವಾದ ವಿರುತ್ತದೆ. ಮುಖ್ಯವಾದ ಕೆಲಸ ಒಂದನ್ನು ಪೂರ್ಣಗೊಳಿಸಲು ವಿಫಲರಾಗುವಿರಿ. ನಿಮ್ಮ ತಂದೆಯವರ ನಡೆ ನುಡಿಯಲ್ಲಿ ನಿಜಾಂಶ ಇರುತ್ತದೆ. ಇದರಿಂದಾಗಿ ಅವರಿಗೆ ಮಿತ್ರರಿಗಿಂತ ವಿರೋಧಿಗಳೇ ಹೆಚ್ಚಾಗಿರುತ್ತಾರೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ವೃಷಭ
ಕುಟುಂಬಕ್ಕಾಗಿ ಆತ್ಮೀಯರಿಂದ ಹಣದ ಸಹಾಯ ಪಡೆಯುವಿರಿ. ಕುಟುಂಬದ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳುವಿರಿ. ಮಕ್ಕಳೊಂದಿಗೆ ಸಂತಸದಿಂದ ದಿನ ಕಳೆಯುವಿರಿ. ಅಪರೂಪಕ್ಕೆ ಸೋದರಿಯ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ ಉಂಟಾಗಲಿದೆ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಭವಿಷ್ಯದ ಜೀವನಕ್ಕಾಗಿ ಹಣ ಉಳಿಸುವ ಯೋಚನೆ ಸಾಕಾರಗೊಳ್ಳಲಿದೆ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಮಿಥುನ
ಲಾಭವೆನಿಸುವ ಕೆಲಸವನ್ನಷ್ಟೇ ಆಯ್ದುಕೊಳ್ಳುವಿರಿ. ಮನದಲ್ಲಿರುವ ನೋವನ್ನು ಮರೆತು ಎಲ್ಲರೊಂದಿಗೆ ಸಂತೋಷ ಹಂಚಿಕೊಳ್ಳುವಿರಿ. ನಿಮ್ಮ ಮಕ್ಕಳ ಜೀವನದಲ್ಲಿ ಮನ ಮೆಚ್ಚುವಂತಹ ಬದಲಾವಣೆಗಳು ಉಂಟಾಗಲಿವೆ. ಅನಿರೀಕ್ಷಿತ ಧನಲಾಭವಿರುತ್ತದೆ. ಕೆಲಸ ಕಾರ್ಯಗಳ ಮಧ್ಯೆ ನಿಮ್ಮ ಆರೋಗ್ಯದ ಬಗ್ಗೆಯೂ ಗಮನ ನೀಡುವಿರಿ. ಸ್ನೇಹ ಪ್ರೀತಿಯಿಂದ ಜನರ ಮನಸ್ಸನ್ನು ಗೆಲ್ಲುವಿರಿ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬೂದು
ಕಟಕ
ಹಣದ ಕೊರತೆಯನ್ನು ಕಡಿಮೆ ಮಾಡಲು ಬಿಡುವಿನ ವೇಳೆಯಲ್ಲಿ ವ್ಯಾಪಾರವೊಂದನ್ನು ಆರಂಭಿಸುವಿರಿ. ನವದಂಪತಿಗಳಿಗೆ ಸಂತಾನ ಲಾಭವಿದೆ. ಹಳೆಯ ಅನಾರೋಗ್ಯದ ಸಮಸ್ಯೆಯು ಬಗೆ ಹರಿಯುತ್ತದೆ. ಸಂಗೀತ, ಯೋಗಗಳಲ್ಲಿ ಪರಿಣಿತಿ ಗಳಿಸುವಿರಿ. ಮನೆಯ ಸುತ್ತಮುತ್ತಲಿನ ವಯೋವೃದ್ಧರಿಗೆ ಸಹಾಯ ಮಾಡುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರೊಬ್ಬರು ಸಹಾಯ ಮಾಡುತ್ತಾರೆ.
ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ
ಸಿಂಹ
ಉದ್ಯೋಗದಲ್ಲಿ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ತಂದೆಯ ಆರೋಗ್ಯದಲ್ಲಿ ಚೇತರಿಕೆ ಉಂಟಾಗುತ್ತದೆ. ಅಶಕ್ತರ ವಿವಾಹಕ್ಕೆ ಸಹಾಯ ಮಾಡುವಿರಿ. ವಿದೇಶಕ್ಕೆ ತೆರಳುವ ಯೋಗವಿದೆ. ಮಿತಿ ಇಲ್ಲದ ಆಹಾರ ಸೇವಿಸುವ ಕಾರಣ ಅಜೀರ್ಣತೆ ಉಂಟಾಗುತ್ತದೆ. ಸಾಲದ ವ್ಯವಹಾರದಲ್ಲಿ ಆತ್ಮೀಯರ ಜೊತೆ ಮನಸ್ತಾಪ ಉಂಟಾಗಲಿದೆ. ಮಕ್ಕಳಿಗೆ ಅವರಿಗೆ ಇಷ್ಟವಾದ ತಿಂಡಿ ತಿನಿಸು ನೀಡುವುದಲ್ಲಿ ಸಂತಸ ಕಾಣುವಿರಿ.
ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಕಪ್ಪು
ಕನ್ಯಾ
ಹಣಕಾಸಿನ ವಿಚಾರದಲ್ಲಿ ಆತಂಕ ಮನೆ ಮಾಡಿರುತ್ತದೆ. ಆತ್ಮೀಯರ ಮಾತನ್ನು ಅರ್ಥ ಮಾಡಿಕೊಳ್ಳದೆ ವಿವಾದ ಉಂಟುಮಾಡುವಿರಿ. ಬೇರೆಯವರ ಬಗ್ಗೆ ಸಂಗಾತಿಯ ಸಹಕಾರದ ಮನೋಭಾವನೆ ಹೊಸ ಚೈತನ್ಯವನ್ನು ತುಂಬುತ್ತದೆ. ತಪ್ಪಾದ ಅಭ್ಯಾಸಗಳು ಅನಾರೋಗ್ಯಕ್ಕೆ ಕಾರಣವಾಗಲಿದೆ. ಹಣಕಾಸಿನ ಕೊರತೆ ಕಂಡು ಬರುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ.
ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ ತಿಳಿ ಹಸಿರು
ತುಲಾ
ಅತಿ ಚುರುಕುತನದಿಂದ ವರ್ತಿಸುವ ನೀವು ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಸಂಗಾತಿಯಲ್ಲಿ ಇಲ್ಲದ ತಪ್ಪನ್ನು ಹುಡುಕಲು ಹೋಗಿ ಕಷ್ಟಕ್ಕೆ ಸಿಲುಕಿವಿರಿ. ಮಕ್ಕಳ ಜೊತೆ ಆನಂದದಿಂದ ಸಮಯ ಕಳೆಯುವಿರಿ. ನೆರೆಹೊರೆಯ ಮಕ್ಕಳಿಗೆ ತಿಂಡಿ ತಿನಿಸು ನೀಡಿ ಅವರ ಸಂತೋಷದಲ್ಲಿ ಪಾಲ್ಗೊಳ್ಳುವಿರಿ. ಧಾರ್ಮಿಕ ಕೇಂದ್ರಕ್ಕೆ ಹಣವನ್ನು ದೇಣಿಗೆಯಾಗಿ ನೀಡುವಿರಿ.
ಪರಿಹಾರ : ಹಣೆಯಲ್ಲಿ ತಿಲಕ ಹಚ್ಚಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನಸು ಗೆಂಪು
ವೃಶ್ಚಿಕ
ಹಣಕಾಸಿನ ವ್ಯವಹಾರದಲ್ಲಿ ವಿವಾದ ಎದುರಾಗುತ್ತದೆ. ತಾಳ್ಮೆ ಇದ್ದಷ್ಟು ಜೀವನದಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ಅಡ್ಡಿ ಆತಂಕದ ಛಾಯೆ ಕಂಡು ಬರದು. ಆದರೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ . ದಿನ ಕಳೆದಂತೆ ಅದ್ಭುತವಾದ ಯಶಸ್ಸೊಂದು ನಿಮ್ಮದಾಗುತ್ತದೆ. ಕುಟುಂಬದವರ ಜೊತೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಧನಸ್ಸು
ಮಕ್ಕಳು ತಮ್ಮ ಆಸೆ ಆಕಾಂಕ್ಷೆಗಳ ಈಡೇರಿಕೆಗೆ ನಿಮ್ಮ ಮೇಲೆ ಒತ್ತಡ ಹೇರುತ್ತಾರೆ. ಮನೆಯ ಹೆಣ್ಣುಮಕ್ಕಳ ವಿವಾಹದ ಬಗ್ಗೆ ಮಾತುಕತೆ ನಡೆಸುವಿರಿ. ವಂಶಕ್ಕೆ ಸೇರಿದ ಹಳೆಯ ಮನೆಯಲ್ಲಿ ಸಂತೋಷಕೂಟವನ್ನು ಆಯೋಜಿಸುವಿರಿ. ಹಣದ ತೊಂದರೆ ಇಲ್ಲದ ಕಾರಣ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಹಣದ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಕಷ್ಟವಿಲ್ಲದ ಜೀವನ ನಿರ್ವಹಣೆಗಾಗಿ ಉಪವೃತ್ತಿಯನ್ನು ಆರಂಭಿಸುವಿರಿ.
ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ
ಮಕರ
ಕುಟುಂಬದ ಮತ್ತು ಅಕ್ಕಪಕ್ಕದ ಮಕ್ಕಳ ಜೊತೆಯಲ್ಲಿ ಮನರಂಜನಾ ಚಟುವಟಿಕೆಯಲ್ಲಿ ತೊಡಗುವಿರಿ. ಎಲ್ಲರ ಜೊತೆ ಧಾರ್ಮಿಕ ಸ್ಥಳಕ್ಕೆ ತೆರಳುವಿರಿ. ಜನಸೇವೆ ಮಾಡುವ ಆಶಯದಿಂದ ಸಂಘ ಸಂಸ್ಥೆಯನ್ನು ಸ್ಥಾಪಿಸುವಿರಿ. ಹಣಕಾಸಿನ ಅಗತ್ಯತೆಯನ್ನು ಅರಿತು ತಂದೆಯವರು ಹಣದ ಸಹಾಯ ಮಾಡಲಿದ್ದಾರೆ. ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ದೊರೆಯುತ್ತದೆ.
ಪರಿಹಾರ : ತಾಯಿಯವರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ :1
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದು
ಕುಂಭ
ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ತೋರುವಿರಿ. ವಿದ್ಯಾರ್ಥಿಗಳು ಕರ್ತವ್ಯ ಪಾಲನೆಗೆ ಹೆಚ್ಚಿನ ಪ್ರಯತ್ನಪಡುತ್ತಾರೆ. ಬಿಡುವಿಲ್ಲದ ಕೆಲಸದಿಂದ ದೈಹಿಕವಾಗಿ ಕುಗ್ಗುವಿರಿ. ಅನಾವಶ್ಯಕ ವಾದ ವಿವಾದಗಳಿಗೆ ಬೇಸರ ಉಂಟಾಗಲಿದೆ. ಅಗತ್ಯಕ್ಕಿಂತ ಹೆಚ್ಚಿನ ಖರ್ಚು ವೆಚ್ಚಗಳು ಎದುರಾಗುತ್ತವೆ. ಹಿತೈಷಿಗಳ ಮಾರ್ಗದರ್ಶನದಲ್ಲಿ ಮುಂದುವರೆದರೆ ಯಾವುದೇ ತೊಂದರೆ ಎದುರಾಗದು.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ
ಮೀನ
ಪ್ರತಿಯೊಂದು ಕೆಲಸವನ್ನು ಪೂರ್ವಯೋಜನೆಯಿಂದ ಮಾಡುವ ಕಾರಣ ಯಾವುದೇ ತೊಂದರೆ ಎದುರಾಗದು. ಅಪರೂಪವೆಂಬಂತೆ ಸಂಗಾತಿ ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಕೃಷಿ ಭೂಮಿಯನ್ನು ಕೊಳ್ಳುವ ಆಸೆ ಈಡೇರುತ್ತದೆ. ಹಳ್ಳಿಯ ಜೀವನ ನಡೆಸುವ ಪ್ರಯತ್ನ ಈಡೇರುವುದಿಲ್ಲ. ಕಷ್ಟದಲ್ಲಿದ್ದವರಿಗೆ ಹಣದ ಸಹಾಯ ಮಾಡುವಿರಿ. ಬೇರೆಯವರ ಸಹಾಯದಿಂದ ಕೆಲಸ ನಿರ್ವಹಿಸುವ ಅನಿವಾರ್ಯತೆ ಉಂಟಾಗುತ್ತದೆ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).